ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಆದೇಶದಂತೆ ನಡೆದ 20 ದಿನಗಳ ಧಾರ್ಮಿಕ ಶಿಬಿರದ ಸಮಾರೋಪ ಸಮಾರಂಭ ಶೀರೂರು ಮಠದ ಸಭಾಂಗಣದಲ್ಲಿ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶಿಬಿರದ ವಿದ್ಯಾರ್ಥಿಗಳಿಂದ ತಾವು ಕಲಿತ ಪಾಠಗಳ ಪ್ರದರ್ಶನ ನಡೆಯಿತು ಹಾಗೂ ಶಿಬಿರದ ವಿದ್ಯಾರ್ಥಿಗಳಿಂದ ಮಹಾಭಾರತದಲ್ಲಿರುವ ಕಚನ ಗುರುಭಕ್ತಿಯ ಕಥೆಯ ನಾಟಕ ನಡೆಯಿತು. ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಉಪಸ್ಥಿತರಿದ್ದರು. ಪ್ರಸ್ತಾವನೆಗೈದು ಆನಂದತೀರ್ಥ ಆಚಾರ್ಯ ಹಾಗೂ ವಿಷ್ಣುಪ್ರಸಾದ್ ಪಾಡಿಗಾರು ಧನ್ಯವಾದ ಸಮರ್ಪಣೆ ಮಾಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


