ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಅಭಿಯಾನ

Upayuktha
0


ಮಂಗಳೂರು: ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಮೇ 08, 2026ರಂದು ಬೆಳಿಗ್ಗೆ 08:00 ಗಂಟೆಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. “ಮಾನವೀಯತೆಯಲ್ಲಿ ಏಕತೆ” ಎಂಬ ಆಶಯದೊಂದಿಗೆ ಆಚರಿಸಲಾದ  ವಿಶ್ವ ರೆಡ್ ಕ್ರಾಸ್ ದಿನಾಚರಣೆ 2026ರ ಅಂಗವಾಗಿ ಸಂಸ್ಥೆಯ. ಈ ಕಾರ್ಯಕ್ರಮವನ್ನು ಘಟಕದ ವಿಸ್ತರಣಾ ಚಟುವಟಿಕೆಗಳ ಭಾಗವಾಗಿ ಆಯೋಜಿಸಲಾಯಿತು.


ಸ್ವಚ್ಛತಾ ಅಭಿಯಾನವು ಕಾಲೇಜು ಆವರಣ ಹಾಗೂ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಸ್ವಚ್ಛತೆ, ಆರೋಗ್ಯಕರ ಜೀವನ ಶೈಲಿ ಹಾಗೂ ಪರಿಸರ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.


ಒಟ್ಟು 24 ಸ್ವಯಂಸೇವಕರು ಉತ್ಸಾಹ ಮತ್ತು ಸಮರ್ಪಣಾ ಭಾವದಿಂದ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಸ್ವಯಂಸೇವಕರು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ, ಶುದ್ಧ ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ತಮ್ಮ ಕೊಡುಗೆ ನೀಡಿದರು.


ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾ ಅಧಿಕಾರಿಗಳು ಸಂಪೂರ್ಣ ಕಾರ್ಯಕ್ರಮವನ್ನು ಸಂಯೋಜಿಸಿ, ಸ್ವಯಂಸೇವಕರಿಗೆ ಮಾರ್ಗದರ್ಶನ ನೀಡಿದರು. ಅವರ ನಿರಂತರ ಸಹಕಾರ ಮತ್ತು ಮೇಲ್ವಿಚಾರಣೆ ಯಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.


ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸಮಾಜಸೇವೆ, ತಂಡ ಸ್ಪೂರ್ತಿ ಹಾಗೂ ಮಾನವೀಯ ಮೌಲ್ಯಗಳನ್ನು ಉತ್ತೇಜಿಸಿತು. ಸಮಾಜದ ಕಲ್ಯಾಣಕ್ಕಾಗಿ ಎಲ್ಲರೂ ಸ್ವಚ್ಛತೆಯನ್ನು ಕಾಪಾಡಿ, ಒಟ್ಟಾಗಿ ಕೆಲಸ ಮಾಡಬೇಕು ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಮಾಪ್ತಿ ಗೊಂಡಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter       

Post a Comment

0 Comments
Post a Comment (0)
To Top