ನವನಗರ ಸ.ಪ್ರ.ದ. ಕಾಲೇಜು ಸಹಾಯಕ ಪ್ರಾಧ್ಯಾಪಕ ಸಂಪತ್ತ ಲಮಾಣಿ: ರಾಣಿ ಚೆನ್ನಮ್ಮ ವಿವಿ ಡಾಕ್ಟರೇಟ್ ಪದವಿ

Upayuktha
0

  


ಬಾಗಲಕೋಟೆ: ಬಾಗಲಕೋಟೆ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸಂಪತ್ತ ಲಮಾಣಿ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಗೆ ಅಧಿಸೂಚನೆ ಹೊರಡಿಸಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಕಮಲಾಕ್ಷಿ ತಡಸದ ಅವರ ಮಾರ್ಗದರ್ಶನದಲ್ಲಿಪ್ರಾದೇಶಿಕ ಅಸಮತೋಲನ ಮತ್ತು ರಾಜಕೀಯ ಸಜ್ಜುಗೊಳಿಸುವಿಕೆ: ಉತ್ತರ ಕರ್ನಾಟಕದ ವಿಶ್ಲೇಷಣಾತ್ಮಕ ಅಧ್ಯಯನಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪ್ರೊ.ಸಂಪತ್ತ ಲಮಾಣಿ ಅವರಿಗೆ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಗೆ ಅಧಿಸೂಚನೆ ಹೊರಡಿಸಿದೆ.

 

ಪ್ರೊ.ಸಂಪತ್ತ ಲಮಾಣಿ ಅವರಿಗೆ ಬಾಗಲಕೋಟೆ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಅರುಣಕುಮಾರ ಗಾಳಿ ಅವರು ಹಾಗೂ ಎಲ್ಲಾ ಪ್ರಾಧ್ಯಾಪಕ ಬಳಗದವರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು, ಬಾಗಲಕೋಟೆ ವಿಶ್ವವಿದ್ಯಾಲಯ ವ್ಯಾಪ್ತಿಯ ರಾಜ್ಯಶಾಸ್ತ್ರ ವಿಷಯದ ಬೋಧಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕರ ಬಳಗ, ಗೆಳೆಯರ ಬಳಗದವರು, ಕಾಲೇಜಿನ ಸಮಸ್ತ ವಿದ್ಯಾರ್ಥಿ ಬಳಗದವರು ಅಭಿನಂದನೆ ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top