ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ನಡೆದ ವಿಶೇಷ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ರಾಜರಾಜೇಶ್ವರಿ ನಗರ ಹಬ್ಬದಲ್ಲಿ ಮೇ 30 ರಂದು ಸಾಯಂಕಾಲ 5.30 ರಿಂದ 7ಗಂಟೆಯ ವರೆಗೆ ಬಾಲಕೃಷ್ಣ ರಂಗ ಮಂದಿರದಲ್ಲಿ ನೃತ್ಯ ಗುರು ವಿದುಷಿ ಶ್ರೀಮತಿ ರೂಪಶ್ರೀ ಕೆ. ಎಸ್. ಹಾಗೂ ಶ್ರೀ ಹೃದ್ಯಾ ಅಕಾಡೆಮಿ (ರಿ.) ತಂಡದ ವಿದ್ಯಾರ್ಥಿನಿಯರಾದ ಹೃದ್ಯಾ ಭಟ್ ಕೆ., ನಿವಿಶ ವಿನೋದ್, ವರ್ಣಿಕ ಶ್ರೀವತ್ಸವ, ಅಭಿಲಾಷ ಆಚಾರ್ಜಿ, ಕೇಸರ್ ಸಿಂಗ್, ಡಾ. ಸುನೀತಾ, ಪುಣ್ಯ ಆರ್. ನೃತ್ಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದ್ದರು.
ನಂತರ ಕುಮಾರಿ ಹೃದ್ಯಾ ಅವರು ಜಾನಪದ ನೃತ್ಯ ಹಾಗೂ ಗಾಯನವನ್ನು ಪ್ರಸ್ತುತಪಡಿಸಿದ್ದರು. ಭಾರತೀಯ ಧಾರ್ಮಿಕ ಹಾಗೂ ಕಾರ್ಮಿಕರ ಹಿತರಕ್ಷಣಾ ವೇದಿಕೆ (ರಿ.) ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾರ್ಯಕ್ರಮದ ಕೊನೆಯಲ್ಲಿ ತಂಡದ ಕಲಾವಿದರನ್ನು ಗೌರವಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


