ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣ ರಂಗದಲ್ಲಿ 371 (ಜೆ) ಸೌಲಭ್ಯ ಪಡೆದು ವಿಶೇಷ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ವಿಫುಲ ಅವಕಾಶವಿದೆ. ಈ ಭಾಗದ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಮತ್ತು ಸಾಧನೆಯನ್ನು ಮಾಡಬೇಕು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ತಿಳಿಸಿದರು.
ಕಲಬುರಗಿಯ ರಂಗಮಂದಿರದಲ್ಲಿ ಜೂ. 26ರಂದು ಡಿವೈನ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ನ 200ರಷ್ಟು ಪದವೀಧರರಿಗೆ ಪ್ರಮಾಣ ಪತ್ರ ಪ್ರದಾನ ಮಾಡಿ ಮಾತನಾಡಿ ಸಂವಿಧಾನದ 371 (ಜೆ) ಕಲಂ ನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಾವಿರಾರು ವಿದ್ಯಾರ್ಥಿಗಳು ವೈದ್ಯಕೀಯ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳಲ್ಲಿ ಸೌಲಭ್ಯ ಪಡೆಯುತ್ತಿರುವುದು ಶ್ಲಾಘನೀಯವಾಗಿದೆ. ನರ್ಸಿಂಗ್ ಕೋರ್ಸ್ ಬಹುಬೇಡಿಕೆಯ ಕೋರ್ಸ್ ಆಗಿದ್ದು ಉದ್ಯೋಗ ಹೊಂದಲು ದೇಶವಿದೇಶಗಳಲ್ಲಿ ವ್ಯಾಪಕ ಬೇಡಿಕೆ ಇದೆ.ಡಿವೈನ್ ಸಂಸ್ಥೆಯ ಅಧ್ಯಕ್ಷರಾದ ಡಾ. ಕಿರಣ್ ಜಾರ್ಜ್ ನರ್ಸಿಂಗ್ ಸಂಸ್ಥೆಯನ್ನು ಪ್ರಾರಂಭಿಸಿ ಈ ಭಾಗದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ನರ್ಸಿಂಗ್ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯದ ಸೇವೆಯ ಅಂಗವಾಗಿ ಬಡವರಿಗೆ ಅನ್ನದಾನ ಉಚಿತ ನರ್ಸಿಂಗ್ ಶಿಕ್ಷಣ 41 ಬಾರಿ ರಕ್ತದಾನ 33 ಬಾರಿ ರಕ್ತದಾನ ಶಿಬಿರ ಆಯೋಜನೆ ಕಂಬಳಿ ವಿತರಣೆ ಸೇರಿದಂತೆ ಸಮಾಜ ಸೇವೆ ಸಲ್ಲಿಸುತ್ತಿರುವುದು ಕೂಡ ಸ್ತುತ್ಯರ್ಹ ಎಂದರು.
ರಾಜ್ಯ ನರ್ಸಿಂಗ್ ಬೋರ್ಡಿನ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಸದಾನಂದ ಪೆರ್ಲ ಉಪಮೇಯರ್ ತೃಪ್ತಿ ಇಲಾಖೆ ಕೆಕೆಆರ್ಡಿಬಿ ಅಧ್ಯಕ್ಷರಾದ ಅರುಣ್ ಕುಮಾರ್ ಪಾಟೀಲ್, ನ್ಯಾಯವಾದಿ ವಸಂತ್ ಪ್ರತಿಪಥಿ, ಫಾ. ರಾಬರ್ಟ್ ರಾಡ್ರಿಗಸ್ ಫಾ. ಪ್ರವೀಣ್, ಫಾ. ರೊನಾಲ್ಡ್, ರವೀಂದ್ರ ಶಾಬಾದಿ, ಸಂಧ್ಯಾರಾಜ್ ಮತ್ತಿತರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


