ಜೀ ಕನ್ನಡದಲ್ಲಿ ದೈವಿಕ ವಾರ: ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ

Upayuktha
0

 


ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಶ್ರೀ ರಾಘವೇಂದ್ರ ಮಹಾತ್ಮೆ' ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಯರ ಮಹಿಮೆಯನ್ನು ತೆರೆ ಮೇಲೆ ಅಚ್ಚುಕಟ್ಟಾಗಿ ಮೂಡಿಸುತ್ತಿರುವ ಈ ಕಥಾಹಂದರಕ್ಕೆ ಮನೆಮನೆಯಿಂದಲೂ ಉತ್ತಮ ಮೆಚ್ಚುಗೆ ಸಿಕ್ಕಿದೆ.


ರಾಯರ ಈ ಕಥೆಯು ಶಂಕುಕರ್ಣನ ಜನ್ಮ ರಹಸ್ಯದಿಂದ ಹಿಡಿದು, ಪ್ರಹ್ಲಾದ, ಬಾಹ್ಲೀಕ ಮತ್ತು ವ್ಯಾಸರಾಯರ ಅವತಾರಗಳ ನಂತರ ನಾಲ್ಕನೇ ಜನ್ಮದಲ್ಲಿ ವೆಂಕಟನಾಥರಾಗಿ ಜನಿಸುವವರೆಗೆ ಅತಿ ಕುತೂಹಲಕಾರಿಯಾಗಿದೆ. ರೈತರಿಗೆ ವಿತರಿಸಿದ್ದ ಹುಳು ಬಿದ್ದ ಭತ್ತದ ಮೂಟೆಯನ್ನು ರಾಯರು ತಮ್ಮ ಮಂತ್ರಾಕ್ಷತೆಯಿಂದ ಪರಿಶುದ್ಧಗೊಳಿಸಿದ ಪವಾಡವು ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದೆ. ಇದರ ಜೊತೆಗೆ, ಸಂಸಾರ ಜೀವನದಲ್ಲಿದ್ದ ರಾಯರು ಸನ್ಯಾಸತ್ವದತ್ತ ಹೊರಳುವಾಗ ಅವರ ಪತ್ನಿ ಸರಸ್ವತಿಯವರು ಪಡುವ ಪಾಡು ಮನ ಮುಟ್ಟುವಂತಿದ್ದು ಕಥೆಯನ್ನು ಭಾವುಕತೆಯ  ಉತ್ತುಂಗಕ್ಕೆ ಕೊಂಡೊಯ್ಯುತ್ತದೆ.


ತಂಜಾವೂರಿನಲ್ಲಿ  ರಾಜ ರಘುನಾಥ ಭೂಪಾಲನ ಸಮ್ಮುಖದಲ್ಲಿ, ಗುರು ಸುಧೀಂದ್ರರು ವೆಂಕಟನಾಥರಿಗೆ ಸನ್ಯಾಸ ದೀಕ್ಷೆಯನ್ನು ನೀಡಿ 'ಶ್ರೀ ರಾಘವೇಂದ್ರ ತೀರ್ಥರು' ಎಂದು ನಾಮಕರಣ ಮಾಡುವ ಐತಿಹಾಸಿಕ ಕ್ಷಣಗಳು, ಈ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. ಭಕ್ತಿ ಮತ್ತು ವೈರಾಗ್ಯದ ಸಂಕೇತವಾಗಿರುವ ರಾಯರ ಪಾತ್ರದಲ್ಲಿ ನಟ 'ಪರೀಕ್ಷಿತ್' ಅವರು ಕಾಣಿಸಿಕೊಳ್ಳಲಿದ್ದಾರೆ.


ರಾಯರ ಜೀವನದ ಆದರ್ಶಗಳನ್ನು ತಿಳಿಯಲು ವೀಕ್ಷಿಸಿ   'ಶ್ರೀ ರಾಘವೇಂದ್ರ ಮಹಾತ್ಮೆ ಶನಿವಾರ ಹಾಗು ಭಾನುವಾರ ಸಂಜೆ 6 ಗಂಟೆಗೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top