ಕಲಬುರಗಿ: ಜಿಲ್ಲೆಯ ಅಫ್ಜಲಪುರ ಮೂಲದ ಪ್ರತಿಭಾವಂತ ಚಿತ್ರಕಲಾವಿದ ಡಾ. ರವೀಂದ್ರನಾಥ ವಿಠ್ಠಲರಾವ ಮೊಹರೀರ ಅವರಿಗೆ ಚಿತ್ರಕಲಾ ಕ್ಷೇತ್ರಕ್ಕೆ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ ತಮಿಳುನಾಡಿನ ಹೊಸೂರಿನ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.ಸಮಾರಂಭದಲ್ಲಿ ಡಾ. ಕೃಷ್ಣಮೂರ್ತಿ ಸ್ವಾಮೀಜಿ, ಪದ್ಮಶ್ರೀ ಡಾ. ಎಸ್. ಜಿ. ಸುಶೀಲಮ್ಮ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಲಬುರಗಿಯ ಹೆಸರಾಂತ ಕಲಾವಿದ ವಿ. ಜಿ. ಅಂದಾನಿ ಅವರ ಕಲಾನಿಕೇತನ ಚಿತ್ರಶಾಲೆಯಲ್ಲಿ ಡಿಪ್ಲೊಮಾ ಶಿಕ್ಷಣ ಪಡೆದಿರುವ ಅವರು, ಕ್ಯಾನ್ವಾಸ್ ಪೇಂಟಿಂಗ್ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಅವರ ಕಲಾಕೃತಿಗಳು ಅನೇಕ ಪ್ರದರ್ಶನಗಳಲ್ಲಿ ಮೆಚ್ಚುಗೆ ಗಳಿಸಿದ್ದು, ಚಿತ್ರಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹಲವು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

