ಉಡುಪಿ: ರಾಗಧನ ಸಂಸ್ಥೆಯ 50ನೆಯ ಸರಣಿ ಸಂಗೀತ ಕಾರ್ಯಕ್ರಮವು, ಶ್ರೀ ಎಲ್ಲೂರು ಲಕ್ಷ್ಮೀನಾರಾಯಣ ಜ್ಯೋತಿಷ್ಕ ಸ್ಮರಣಾ ಟ್ರಸ್ಟ್ ನ ಸಹಯೋಗದೊಂದಿಗೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜೂನ್ 21ರಂದು ಭಾನುವಾರ ಅಪರಾಹ್ನ 3.45ರಿಂದ ನಡೆಯಲಿದೆ.
ಚೆನ್ನೈನ ಸ್ವರಾತ್ಮಿಕಾ ಶ್ರೀಕಾಂತ್ ಅವರು ಕರ್ನಾಟಕ ಸಂಗೀತ ಕಛೇರಿಯನ್ನು ನಡೆಸಿಕೊಡಲಿದ್ದಾರೆ. ಇವರಿಗೆ ತನ್ಮಯೀ ಉಪ್ಪಂಗಳ ವಯೋಲಿನ್ ನಲ್ಲಿ ಹಾಗೂ ಸುನಾದ ಕೃಷ್ಣ ಅಮೈ ಮೃದಂಗದಲ್ಲಿ ಸಹಕರಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


