ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಕೇರಳದ ಗಡಿನಾಡಿನ ಶಾಖೆಯಿಂದ 24-6-2026 ರಂದು ಬುಧವಾರ ಅಪರಾಹ್ನ 3.30ಕ್ಕೆ ಕಾಸರಗೋಡು ಜಿಲ್ಲೆಯ ಧರ್ಮತ್ಕಡ್ಕ ಯುವಕ ಸಂಘದ ಸಭಾಂಗಣದಲ್ಲಿ ಕೇರಳ ಗ್ರಂಥಾಲಯ ಪಿತಾಮಹ ಶ್ರೀ ಎ.ಎನ್.ಫಣಿಕ್ಕರ್ ಸ್ಮರಣಾರ್ಥ 2026 ವಚನಾ ಸಪ್ತಾಹ ಸಲುವಾಗಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಕನ್ನಡ ಕಣ್ಮಣಿ ಕಯ್ಯಾರ ಕಿಞ್ಞಣ್ಣ ರೈ ಇವರ ವಿಷಯದ ಕುರಿತು ಕೇರಳದ ಗಡಿನಾಡ ಚಿಂತಕರು, ಸಾಹಿತಿಗಳಾದ ರಾಧಾಕೃಷ್ಣ ಕೆ. ಉಳೆಯತ್ಕಡ್ಕ ಉಪನ್ಯಾಸ ನಡೆಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚ ಕೇರಳದ ಗಡಿನಾಡಿನ ಶಾಖೆಯ ಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಕಾರಂತ್ರವರು ವಹಿಸಲಿದ್ದಾರೆ. ಸಾರ್ವಜನಿಕವಾಗಿ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ವಿಚಾರ ಸಂಕಿರಣವನ್ನು ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಕೇರಳದ ಗಡಿನಾಡಿನ ಶಾಖೆಯ ನೂತನ ಅಧ್ಯಕ್ಷರಾದ ರಾಧಾಮಣಿ ರಾವ್ ವಿನಂತಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


