ಈ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಮಂತ್ರದೊಂದಿಗೆ ಮುನ್ನಡೆಯುತ್ತಿದ್ದು, ದೇಶದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಬಡವರ್ಗದ ಶೋಷಿತ ಹಾಗೂ ಬುಡಕಟ್ಟು ಕುಟುಂಬಗಳಿಗೆ ಮೂಲಸೌಕರ್ಯ ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ 2023ರಲ್ಲಿ 'ಪಿಎಂ ಜನ್ಮನ್' ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಮಾರ್ಗಸೂಚಿ ಆಧರಿಸಿ ಜೇನು ಕುರುಬ ಮತ್ತು ಕೊರಗ ಸಮುದಾಯಗಳು ಹೆಚ್ಚಿರುವ ಪ್ರದೇಶಗಳನ್ನು ಸಮೀಕ್ಷೆ ಮೂಲಕ ಗುರುತಿಸಿ, ಆ ಪ್ರದೇಶಗಳ ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದೀಗ ಪರಕ್ಕಾಲು ಕೊರಗ ಕಾಲೊನಿಯಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಪ್ರಧಾನಮಂತ್ರಿ ಜನ್ಮನ್ ಯೋಜನೆ ಒಂದು ಅದ್ಭುತ ಪರಿಕಲ್ಪನೆಯಾಗಿದ್ದು, ಬುಡಕಟ್ಟು ಸಮುದಾಯದ ಪ್ರತಿಯೊಬ್ಬ ಸದಸ್ಯರೂ ಸರ್ಕಾರಿ ಯೋಜನೆಗಳಿಂದ ಪ್ರಯೋಜನ ಪಡೆಯುವಂತಾಗುವುದು ಪ್ರಧಾನಮಂತ್ರಿ ಮೋದಿ ಸರ್ಕಾರದ ಆಶಯ ಹಾಗೂ ಗುರಿಯಾಗಿದೆ. ಈ ಹಿಂದೆ ಕೇವಲ ವೋಟ್ ಬ್ಯಾಂಕ್ ರಾಜಕಾರಣದ ಲೆಕ್ಕಾಚಾರದಡಿ ಅಭಿವೃದ್ಧಿ ಕೆಲಸಗಳು ಸಾಮಾನ್ಯವಾಗಿ ನಡೆಯುತ್ತಿದ್ದವು. ಆದರೆ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಯಾವುದೇ ತಾರತಮ್ಯವಿಲ್ಲದೆ ಸಮಾಜದ ಕಟ್ಟಕಡೆಯ ಶೋಷಿತ ಜನರ ಅಭಿವೃದ್ಧಿಯನ್ನೇ ಮುಖ್ಯ ಗುರಿಯಾಗಿಸಿಕೊಂಡು ಹತ್ತಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



