ಕೃತಿ ಕೈಲಾರ್‌ಗೆ ದೂರದರ್ಶನ 'ಬಿ' ಗ್ರೇಡ್ ಕಲಾವಿದೆ ಮಾನ್ಯತೆ

Upayuktha
0


ಉಪ್ಪಿನಂಗಡಿ: ಭರತನಾಟ್ಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಉಪ್ಪಿನಂಗಡಿಯ ಕೃತಿ ಕೈಲಾರ್ ಅವರಿಗೆ ಪ್ರಸಾರ ಭಾರತಿ ದೂರದರ್ಶನದಿಂದ 'ಬಿ' ಗ್ರೇಡ್ ಕಲಾವಿದೆಯಾಗಿ ಮಾನ್ಯತೆ ದೊರೆತಿದೆ.

ಕೈಲಾರ್ ರಾಜಗೋಪಾಲ ಭಟ್ ಹಾಗೂ ಸತ್ಯೇಶ್ವರಿ ದಂಪತಿಯ ಪುತ್ರಿಯಾಗಿರುವ ಕೃತಿ, ಪ್ರತಿಭೆಯನ್ನು ಗುರುತಿಸಿದ ಪ್ರಸಾರ ಭಾರತಿಯ ಆಯ್ಕೆ ಸಮಿತಿಯು ದೂರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸಲು 'ಬಿ' ಗ್ರೇಡ್ ಕಲಾವಿದೆಯಾಗಿ ಆಯ್ಕೆ ಮಾಡಿದೆ.

ಪ್ರಸ್ತುತ ಮೈಸೂರಿನ ಜೆ.ಎಸ್.ಎಸ್ ಲಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿರುವ ಕೃತಿ, ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಹಾಗೂ ವಿದುಷಿ ಸುಹಾಸಿನಿ ಕೌಲಗಿ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯ ಅಭ್ಯಾಸ ಮುಂದುವರಿಸುತ್ತಿದ್ದಾರೆ. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top