ಉದ್ಘಾಟಕರಾಗಿ ಮಾಜಿ ಸೈನಿಕರು ಹಾಗೂ ನಿವೃತ್ತ ಉಪನ್ಯಾಸಕರಾದ ಹರೀಶ್ ರೈ ಧರ್ಮಶ್ರೀ, ಉಜಿರೆ ಅವರು ಮಾತನಾಡಿ, 'ಇಂದಿನ ಸಾಮಾಜಿಕ ಜೀವನದಲ್ಲಿ ಅವಶ್ಯಕವಿರುವ ನಾಯಕತ್ವ, ಸೇವಾಮನೋಭಾವನೆ ಹಾಗೂ ಜೀವನ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳು ಅತ್ಯುತ್ತಮ ವೇದಿಕೆ' ಎಂದರು.
ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ, ಸರ್ವರನ್ನೂ ಸ್ವಾಗತಿಸಿದರು.
ಶತಾಬ್ದಿ ವಿದ್ಯಾಲಯ ಸಮಿತಿ (ರಿ.) ಮುಂಡಾಜೆ ಇದರ ಸಂಚಾಲಕರಾದ ನಾರಾಯಣ ಫಡ್ಕೆ ಯುವ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ನಾಯಕರಿಗೆ ಕಾಲೇಜಿನ ಪ್ರಾಂಶುಪಾಲೆ ಗೀತಾ ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಾಯಕರುಗಳ ಪ್ರಾಪ್ತಿ, ಮೋಕ್ಷಿತ್, ಅನೀಕ್ಷಾ ಹಾಗೂ ಯಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿ ಪ್ರತಿನಿಧಿಗಳ ಪರವಾಗಿ ಪ್ರಾಪ್ತಿ ತಮ್ಮ ಮಂತ್ರಿ ಮಂಡಲದ ಮುಂದಿನ ಯೋಚನೆ-ಯೋಜನೆಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ನಮಿತಾ ಕೆ. ಆರ್. ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ಇವರು ವಂದಿಸಿದರು. ಎಲ್ಲಾ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


