ಮಹಾಭಾರತದ ಒಟ್ಟು ಸಾರವೇ ಧರ್ಮ: ಡಾ. ವಿನಾಯಕ ಭಟ್ ಗಾಳಿಮನೆ

Upayuktha
0



ಕಾರ್ಕಳ: ಮಹಾಭಾರತದಲ್ಲಿ ಎಲ್ಲ ಪಾತ್ರಗಳೂ ನಾಯಕರಂತೆ ವಿಜೃಂಭಿಸಿ ಧರ್ಮರಾಯ  ಮಾತ್ರ ಮೂಲೆಗುಂಪಾಗುವಂತಾದರೂ ವ್ಯಾಸರು ಮಾತ್ರ ಆತನನ್ನು ರಾಜನನ್ನಾಗಿ ಇಟ್ಟುಕೊಂಡು ಧರ್ಮರಾಜನಾಗಿ ನೋಡಿಕೊಂಡರು. ಮಹಾಭಾರತದ ಒಟ್ಟು ಸಾರವಾಗಿ ನಾವು ನೋಡುವುದು ಧರ್ಮವನ್ನೇ ಆಗಿದೆ ಎಂಬುದಾಗಿ ವಿದ್ವಾಂಸರಾದ ಡಾ. ವಿನಾಯಕ ಭಟ್ ಗಾಳಿಮನೆ ತಿಳಿಸಿದರು.


ಇವರು ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ 2026ರ ವರ್ಷಪೂರ್ತಿ ಪ್ರತೀ ತಿಂಗಳು ನಡೆಯುತ್ತಿರುವ ಮಹಾಭಾರತ ಭಾವದೀಪ ಎಂಬ ಉಪನ್ಯಾಸಮಾಲೆಯ ಷಷ್ಠ ಸೋಪಾನದಲ್ಲಿ ಅವರು ‘ಧರ್ಮನಂದನ’ ಎಂಬ ಕುರಿತಾಗಿ ಜೂನ್ 27ರಂದು ಕಾರ್ಕಳದ ಪ್ರಕಾಶ್ ಹೋಟೆಲ್ ಇದರ ‘ಸಂಭ್ರಮ’ ಸಭಾಂಗಣದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. 


ಅಧರ್ಮದಿಂದ ಗಳಿಸುವ ಸಕಲ ಸಂಪತ್ತು, ಕೀರ್ತಿ ಪ್ರತಿಷ್ಠೆಗಳು ಅಶಾಶ್ವತವಾಗಿದ್ದು ಧರ್ಮಮಾರ್ಗದಿಂದ ಗಳಿಸುವಂಥಾದ್ದೇ ಶಾಶ್ವತ ಎಂಬುದನ್ನು ಪ್ರತಿಪಾದಿಸಿದ ಧರ್ಮರಾಯ ಯಾವ ಸಂದರ್ಭದಲ್ಲಿಯೂ ಧರ್ಮಪ್ರಜ್ಞೆಯನ್ನು ಬೀಳಲು ಬಿಡದೆ ಅದನ್ನೇ ಬದುಕಾಗಿಸಿಕೊಂಡು ಪಾಂಡವರ ಏಕಸೂತ್ರತೆಯನ್ನೂ ಕಾಪಾಡಿದ. ಸಂಘರ್ಷವೆಂಬ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ದುರ್ಯೋಧನ ಮಾಡುತ್ತಾ ಬಂದರೆ ಅದಕ್ಕೆ ನೀರು ಸುರಿಯುವ ಕಾರ್ಯವನ್ನು ಧರ್ಮರಾಯ ಮಾಡುತ್ತಾ ಬಂದು ಎತ್ತರದಲ್ಲಿ ನಿಲ್ಲುತ್ತಾನೆ ಎಂದರು.


ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ, ಮಿತ್ರಪ್ರಭಾ ಹೆಗ್ಡೆ, ಏರ್‌ವೈಸ್ ಮಾರ್ಷೆಲ್ ರಮೇಶ್ ಕಾರ್ಣಿಕ್, ಅಲ್ಲಮಪ್ರಭು ಪೀಠದ ಪ್ರಧಾನ ನಿರ್ದೇಶಕರಾದ ತೆ.ವಿಜಯ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಶಾರ್ವರಿ ಪ್ರಾರ್ಥಿಸಿ ಡಾ. ಮಾಲತಿ ಜಿ. ಪೈ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಸುಲೋಚನಾ ಬಿ.ವಿ ವಂದಿಸಿದರು. 

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top