ಸುರತ್ಕಲ್: ಇಂದು ನಾವು ನೆಡುವ ಗಿಡ ಉಜ್ವಲ ಸುಂದರ ಪರಿಸರ ನಿರ್ಮಾಣಕ್ಕೆ ಕಾರಣವಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಸರ ಪ್ರೀತಿ ಬೆಳೆಸುವ ಕಾರ್ಯ ನಡೆಯಬೇಕು ಎಂದು ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್ ನುಡಿದರು.
ಸೂರಿಂಜೆ ಸರಕಾರಿ ಪ್ರೌಢ ಶಾಲೆಯ ನಿಸರ್ಗ ಇಕೋ ಕ್ಲಬ್, ಇಂಟರಾಕ್ಟ್ ಕ್ಲಬ್ ಮತ್ತು ಸುರತ್ಕಲ್ ರೋಟರಿ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಹಣ್ಣಿನ ಗಿಡ ನೆಟ್ಟು ಮಾತನಾಡಿದರು.
ಸುರತ್ಕಲ್ ರೋಟರಿ ಕ್ಲಬ್ ನ ಕಾರ್ಯದರ್ಶಿ ರಾಮಮೋಹನ್ ವೈ, ಸೇವಾ ನಿರ್ದೇಶಕ ಕೃಷ್ಣ ಮೂರ್ತಿ, ನಿಯೋಜಿತ ಅಧ್ಯಕ್ಷ ಶ್ರೀಧರ್ ಟಿ. ಎನ್. ಶಾಲಾ ಮುಖ್ಯ ಶಿಕ್ಷಕಿ ವಿಜಯ ಕುಮಾರಿ, ಶಿಕ್ಷಕ ಸತೀಶ್ ಕುಮಾರ್, ಶಿಕ್ಷಕಿಯರಾದ ಸವಿತ, ಯಶೋದಾ ಕುಮಾರಿ, ಸವಿತಾ ಕುಮಾರಿ ಉಪಸ್ಥಿತರಿದ್ದರು. ಇಂಟರ್ಯಾಕ್ಟ್ ಶಿಕ್ಷಕ ಸಂಯೋಜಕ ಸುರೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


