ಪುತ್ತೂರು: "ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನ-೨೦೨೬" ಅಂಗವಾಗಿ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿದ್ಯಾರ್ಥಿ ವಿಭಾಗದ ಕಿರು ಪ್ರಬಂಧ ಸ್ಪರ್ಧೆಯಲ್ಲಿ ಬಪ್ಪಳಿಗೆ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದ ವಿದ್ಯಾರ್ಥಿಗಳು ಬಹುಮಾನ ಪಡೆದುಕೊಂಡಿರುತ್ತಾರೆ.
೧೦ನೇ ತರಗತಿಯ ಅನರ್ಘ್ಯಶ್ರೀ ಪ್ರಥಮ ಬಹುಮಾನ ಹಾಗೂ ೧೦ನೇ ತರಗತಿಯ ದೈವಿಕ್ ಶೆಟ್ಟಿ ದ್ವಿತೀಯ ಬಹುಮಾನ ಪಡೆದಿದ್ದಾರೆ, ೯ನೇ ತರಗತಿಯ ಆರ್ಯ ಮೋಹನ್ ಎಚ್. ಹಾಗೂ ಪೂರ್ವಿ ವಿ. ಪ್ರೋತ್ಸಾಹಕ ಬಹುಮಾನ ಪಡೆದು ವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


