ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಶ್ರೀ ರಾಘವೇಂದ್ರ ಮಹಾತ್ಮೆ' ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಯರ ಮಹಿಮೆಯನ್ನು ತೆರೆ ಮೇಲೆ ಅಚ್ಚುಕಟ್ಟಾಗಿ ಮೂಡಿಸುತ್ತಿರುವ ಈ ಕಥಾಹಂದರಕ್ಕೆ ಮನೆಮನೆಯಿಂದಲೂ ಉತ್ತಮ ಮೆಚ್ಚುಗೆ ಸಿಕ್ಕಿದೆ.
ಕಳೆದ ವಾರದ ಕಥೆಯಲ್ಲಿ ಪೂರ್ವಾಶ್ರಮದ ಹೆಂಡತಿ ಸರಸ್ವತಿಗೆ ಸದ್ಗತಿ ಕೊಟ್ಟ ಸಂಚಿಕೆ ಮನದುಂಬಿ ಬಂತು. ಪ್ರೇಕ್ಷಕರನ್ನು ಅಲುಗಾಡದಂತೆ ಸೆರೆ ಹಿಡಿಯಿತು. ರಾಯರ ಪಾತ್ರದಲ್ಲಿ ಪರಿಕ್ಷೀತ್ ನಟನೆ ರಾಯರನ್ನೇ ನೋಡಿದಷ್ಟು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದರೆ ರಾಯರು ದೀಕ್ಷೆ ಪಡೆದ ನಂತರ ಮೂಲರಾಮನ ಆಜ್ಞೆಯಂತೆ ದಿವ್ಯ ಸಂಚಾರಕ್ಕೆ ಹೊರಟರು.
ಭುವನಗಿರಿಯಲ್ಲಿ ಪಾದ ಪೂಜೆ ಮುಗಿಸಿಕೊಂಡು ಹೊರಟು ಕಟಗಿರಿಯ ಹತ್ತಿರ ವನ ಭೋಜನಕ್ಕೆ ಕುಳಿತಾಗ ಅಲ್ಲಿಗೆ ಕರಟಗಿರಿಯ ದೇಸಾಯಿ ಅವರು ಬಂದು ತಮ್ಮ ಮನೆಯ ಪೂಜೆಗೆ ರಾಯರನ್ನು ಅಹ್ವಾನಿಸುತ್ತಾರೆ. ಅವರ ಒತ್ತಾಯಕ್ಕೆ ಮಣಿದು ಮನೆಗೆ ಬರುತ್ತಾರೆ ರಾಯರು.
ರಾಯರ ಆಗಮನವನ್ನು ವಿಜೃಂಭಣೆಯಿಂದ ಆಚರಿಸಲು ದೇಸಾಯಿ ಅವರು ಭಕ್ಷ್ಯ ಬೋಜನಗಳನ್ನು ತಯಾರಿಸಲು ಹೇಳುತ್ತಾರೆ. ಅದರಂತೆ ಮನೆಯಲ್ಲಿ ಸಕಲವು ಸಿದ್ದತೆ ನಡೆಯುತ್ತದೆ. ಅಡುಗೆ ಮನಯಲ್ಲಿ ತಯಾರಾದ ಮಾವಿನಕಾಯಿ ಸೀಕರಣೆ ರುಚಿ ಸವಿಯಲು ಹೋಗಿ ದೇಸಾಯಿ ಅವರ ಮಗ ಅದರೊಳಗೆ ಬಿದ್ದು ಪ್ರಾಣ ಬಿಡುತ್ತಾನೆ.
ಪೂಜೆಯಲ್ಲಿ ನಿರತರಾಗಿದ್ದ ರಾಘವೇಂದ್ರ ತೀರ್ಥಂಕರಿಗೆ ಇದರ ಅರಿವಾಗುತ್ತದೆ. ಸತ್ತ ಮಗುವನ್ನ ಪೂಜಾ ಸ್ಥಳಕ್ಕೆ ತರಿಸಿ ತಮ್ಮ ಮಂತ್ರ ಪ್ರೋಕ್ಷಣೆಯಿಂದ ಮಗುವನ್ನು ಬದುಕಿಸುತ್ತಾರೆ. ಪವಾಡವು ಭಕ್ತರನ್ನು ವಿಸ್ಮಯ ಗೊಳಿಸಿದೆ. ಈ ವಾರ "ದೇಸಾಯಿ ಅವರ ಮನೆಗೆ ರಾಯರ ಆಗಮನ"
ಈ ವಾರಾಂತ್ಯ ಶನಿವಾರ ಮತ್ತು ಭಾನುವಾರ ಪ್ರಸಾರವಾಗಲಿದೆ. ಈ ಭಕ್ತಿಯ ಕಥೆಯಲ್ಲಿ ದೇಸಾಯಿ ಪಾತ್ರದಲ್ಲಿ ಹಿರಿಯ ನಟರಾದ ಬಿ.ಸಿ ಪಾಟೀಲ್ ಅವರು ಮಾಡುತ್ತಿದ್ದಾರೆ. ಮೊದಲ ಬಾರಿಗೆ ಕಿರುತೆರೆಯಲ್ಲಿ ಬಿ.ಸಿ ಪಾಟೀಲ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪತ್ನಿಯಾಗಿ ಅರುಣಾ ಬಾಲರಾಜ್ ಕೂಡ ಇದ್ದಾರೆ.
ಈ ಭಕ್ತಿ ಪ್ರಧಾನ ಕಥೆಯನ್ನು ವೀಕ್ಷಿಸಿ 'ಶ್ರೀ ರಾಘವೇಂದ್ರ ಮಹಾತ್ಮೆ' ಇದೇ ಶನಿವಾರ ಹಾಗೂ ಭಾನುವಾರ ಸಂಜೆ 6 ಗಂಟೆಗೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


