ಶಿಕ್ಷಣದ ಜೊತೆಗೆ ಸಂಸ್ಕಾರವಂತರಾಗಿ: ವಿದ್ಯಾರ್ಥಿಗಳಿಗೆ ಕರೆ

Upayuktha
0



ಹುನಗುಂದ: ಮಕ್ಕಳ ಸುಂದರ ಬದುಕಿಗೆ ಶಿಕ್ಷಣ ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣ, ಜೊತೆಗೆ ಒಳ್ಳೆಯ ಸಂಸ್ಕಾರ ಪಡೆಯುವ ಮೂಲಕ ಸುಂದರ ಬದುಕು ರೂಪಿಸಿಕೊಳ್ಳಬೇಕು ಎಂದು ತಾಲೂಕಿನ ನಾಗೂರ ಎಸ್‌ಡಿಎಂಸಿ ಸದಸ್ಯ ಮುತ್ತಪ್ಪ ಬಳಿಗಾರ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್ ವಿತರಿಸಿ ಮಾತನಾಡಿದರು.


ದಾನಿಗಳ ಹಣದಿಂದ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸುತ್ತಿರುವುದು ಉತ್ತಮ ಕಾರ್ಯ. ಇದೇ ಸಂದರ್ಭದಲ್ಲಿ ಅಡಿಯಪ್ಪ ಹುಚ್ನೂರ ಇವರು ಪ್ರತಿದಿನ ಮಕ್ಕಳಿಗೆ ಒಂದು ಶರಣರ ವಚನಗಳನ್ನು ಕಲಿಸುತ್ತಿರುವುದು ಒಳ್ಳೆಯ ಕೆಲಸ ಎಂದರು.


ನೋಟ್‌ಬುಕ್ ದಾನಿ ಅಡಿಯಪ್ಪ ಹುಚ್ನೂರ ಮಾತನಾಡಿ, ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಗ್ರಾಮದ ಪ್ರತಿಯೊಬ್ಬರ ಸಹಕಾರ ಮತ್ತು SDMC ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರ ಬಹು ಮುಖ್ಯ ಎಂದರು.


SDMC ಉಪಾಧ್ಯಕ್ಷ ಗಂಗಮ್ಮ ಹುಚನೂರ ಸೇರಿದಂತೆ ಎಸ್‌ಡಿಎಂಸಿ ಸದಸ್ಯರಾದ ಅಮರಗೌಡ ಪಾಟೀಲ ಅಂದಾನಸ್ವಾಮಿ ಗುಡದೂರಕಲಮಠ ಆರ್. ಚನ್ನದಾನಿ, ಹಿರಿಯಣ್ಣ ರಾಮಶಟ್ಟಿ ದೊಡ್ಡಪ್ಪ ಕುರಿ ಬರಮಗೌಡ ಪಾಟೀಲ ಮುಖ್ಯ ಗುರುಗಳಾದ ಬಸವರಾಜ ಭಜಂತ್ರಿ, ಶಾಲಾ ಸಿಬ್ಬಂದಿ ಸೇರಿದಂತೆ ಗ್ರಾಮದ ಪ್ರಮುಖರು ಭಾಗವಹಿಸಿದ್ದರು. ಮೇಟಿ ಗುರುಗಳು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top