ಉಡುಪಿ: ಗೋಮಾತೆಯ ಗೌರವದ ಅಭಿಯಾನ ಅಂಗವಾಗಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಇಂದು ಜುಲೈ 27 ರಂದು ಮನವಿ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು. ಭಾರತದಲ್ಲಿ ಗೋ ಹತ್ಯೆ ನಿಷೇಧ ಸಂಪೂರ್ಣವಾಗಿ ಜಾರಿಯಾಗಬೇಕು, ಹಸುವಿಗೆ ರಾಷ್ಟ್ರ ಮಾತೆ ಅಥವಾ ರಾಷ್ಟ್ರೀಯ ಪ್ರತಿಷ್ಠಾನದ ಗೌರವಾನ್ವಿತ ಸ್ಥಾನಮಾನ ನೀಡಬೇಕು, ಗೋ ಸೇವೆಗಾಗಿ ಕೇಂದ್ರೀಯ ಕಾನೂನನ್ನು ಜಾರಿಗೆ ತರಬೇಕು ಮತ್ತು ಕೇಂದ್ರೀಯ ಸಚಿವಾಲಯವನ್ನು ಸ್ಥಾಪನೆ ಮಾಡಬೇಕು, ಮೇವು ಭದ್ರತಾ ನೀತಿಯನ್ನು ಅಂತಿಮಗೊಳಿಸಬೇಕು ಅದೇ ರೀತಿ ವೇದ ಲಕ್ಷಣ ಗೋ ವಂಶದ ಜಾನುವಾರುಗಳಿಂದ ಪಡೆದ ಪಂಚಗವ್ಯ ಉತ್ಪನ್ನಗಳ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆಗಳನ್ನು ಮನವಿ ಪತ್ರದಲ್ಲಿ ಸಲ್ಲಿಸಲಾಗಿದೆ. ಮನವಿಯನ್ನು ರಾಜ್ಯಪಾಲರಿಗೆ ಕೂಡ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಗೋಮಾತೆಯ ಗೌರವ ಅಭಿಯಾನದ ತಾಲೂಕು ಸಂಚಾಲಕರುಗಳಾದ ಮಾಜಿ ನಗರಸಭಾ ಸದಸ್ಯ ವಿಜಯ್ ಕೊಡವೂರು, ಮಾಜಿ ಜಿ.ಪಂ ಸದಸ್ಯೆ ಗೀತಾಂಜಲಿ ಸುವರ್ಣ, ಬ್ರಹ್ಮಾವರ ತಾಲೂಕು ಪ್ರಮುಖರಾದ ರಾಘವೇಂದ್ರ ಪ್ರಭು ಕರ್ವಾಲು, ವೀಣಾ ಶೆಟ್ಟಿ, ರಮಿತಾ ಸೂರ್ಯವಂಶಿ, ಸಂತೋಷ್, ಎಬಿವಿಪಿ ಪ್ರಮುಖರಾದ ರಂಜಿತ್, ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


