ಬೆಂಗಳೂರು: ಹಿರಿಯ ಸಾಹಿತ್ಯಾಸಕ್ತ ವೈ.ಎನ್. ಗುಂಡೂರಾವ್ ಅವರು ಸಂಪಾದಿಸಿರುವ 'ಕನ್ನಡ ಅಭಿನಂದನ ಗ್ರಂಥಸೂಚಿ' ಮತ್ತು 'ಜಾಣ್ಣುಡಿಗಳು' ಕೃತಿಗಳ ಲೋಕಾರ್ಪಣೆ ನಗರದ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ನೆರವೇರಿತು.
ಕೃತಿಗಳನ್ನು ಪ್ರೊ. ಜಿ. ಅಶ್ವತ್ಥನಾರಾಯಣ ಹಾಗೂ ಡಾ. ಬೈರಮಂಗಲ ರಾಮೇಗೌಡ ಅವರು ಲೋಕಾರ್ಪಣೆಗೊಳಿಸಿ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಇಂತಹ ಸಂಗ್ರಹ ಗ್ರಂಥಗಳ ಪ್ರಕಟಣೆ ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರಿಗೆ ಅಮೂಲ್ಯ ಕೊಡುಗೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು ಆಕಾಶವಾಣಿಯ ಉದ್ಘೋಷಕಿ ಬಿ.ಕೆ. ಸುಮತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸ್ನೇಹ ಬುಕ್ ಹೌಸ್ನ ಬಿ. ಪರಶಿವಪ್ಪ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


