ಮೇಲಿನಮೊಗರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

Upayuktha
0


ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 47 ನೇ ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿ 10ಲಕ್ಷ ರೂ ವಿಶೇಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು.


ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬೇಡಿಕೆಯಂತೆ ಲಭ್ಯವಿರುವ ಅನುದಾನಗಳನ್ನು ಹೊಂದಿಸಿಕೊಂಡು ಈ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಕಾಮಗಾರಿ ವೇಳೆ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ರಾಮಮೂರ್ತಿ ಸೋಮನಹಳ್ಳಿ, ಪ್ರವೀಣ್ ನಿಡ್ಡೇಲ್, ಶಬರೀಶ್, ಮಂಜುನಾಥ್ ಅತ್ತಾವರ, ವಿನೋದ್ ಕುಮಾರ್, ಶರ್ಮಿಳಾ ಶೆಟ್ಟಿ, ಹರೀಶ್ ರಾವ್, ಸುರೇಶ್ ಕುಮಾರ್, ಜ್ಯೋತಿ ಯಲಬುರ್ಗಿ, ಎಂ.ಬಿ ರಾಜ, ಶೈಲ ಚಂದ್ರಹಾಸ್, ರಮಾಕಾಂತ್ ನಾಯಕ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top