ಶ್ರೀನಿವಾಸ ವಿಶ್ವವಿದ್ಯಾಲಯ: ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Upayuktha
0


ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ & ಕಾಮರ್ಸ್ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಪೋರ್ಟ್ ಶಿಪ್ಪಿಂಗ್ & ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್ ವತಿಯಿಂದ 2026–27ನೇ ಸಾಲಿನ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಜುಲೈ 22, 2026ರಂದು ನಗರದ ಪಾಂಡೇಶ್ವರದ ಸಿಟಿ ಕ್ಯಾಂಪಸ್‌ನಲ್ಲಿ ನಡೆಯಿತು.


ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಹಾಗೂ ಎ. ಶಾಮರಾವ್ ಫೌಂಡೇಶನ್ ಅಧ್ಯಕ್ಷ ಡಾ.ಎ.ಶ್ರೀನಿವಾಸ್ ರಾವ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಸಮರ್ಥ ಆಡಳಿತ ಕೌಶಲ್ಯ ಮತ್ತು ನಾಯಕತ್ವದ ಅಗತ್ಯ ಹೆಚ್ಚುತ್ತಿದೆ. ನಮ್ಮ ವಿಶ್ವವಿದ್ಯಾಲಯದಲ್ಲಿ ಕೇವಲ ಸೈದ್ಧಾಂತಿಕ ಶಿಕ್ಷಣವಷ್ಟೇ ಅಲ್ಲದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಪ್ರಾಯೋಗಿಕ ಹಾಗೂ ಕೌಶಲ್ಯಾಧಾರಿತ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ನಮ್ಮ ಅಧ್ಯಾಪಕರು ನವೀನತೆ ಮತ್ತು ಅನುಭವಾಧಾರಿತ ಕಲಿಕೆಗೆ ಸದಾ ಉತ್ತೇಜನ ನೀಡುತ್ತಾರೆ ಎಂದು ಹೇಳಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯೆ ವಿಜಯಲಕ್ಷ್ಮಿ ಆರ್. ರಾವ್ ವಿದ್ಯಾರ್ಥಿಗಳನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಟುಂಬಕ್ಕೆ ಆತ್ಮೀಯವಾಗಿ ಸ್ವಾಗತಿಸಿ, ವಿಶ್ವವಿದ್ಯಾಲಯವು ಒದಗಿಸುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಪರಿಶ್ರಮದ ಮೂಲಕ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವಂತೆ ಕರೆ ನೀಡಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯೆ ಪ್ರೊ. ಎರ್.ಎ. ಮಿತ್ರಾ ಎಸ್. ರಾವ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಸಂಸ್ಥಾಪಕ ಕುಲಾಧಿಪತಿ ದಿವಂಗತ ಡಾ. ಸಿಎ. ಎ. ರಾಘವೇಂದ್ರ ರಾವ್ ಅವರನ್ನು ಸ್ಮರಿಸಿದರು. ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ದೂರದೃಷ್ಟಿ ಮತ್ತು ಆದರ್ಶಗಳು ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಅಧ್ಯಾಪಕರಿಗೆ ಇಂದಿಗೂ ಸ್ಫೂರ್ತಿಯಾಗಿವೆ ಎಂದರು. ವಿದ್ಯಾರ್ಥಿಗಳು ದೊಡ್ಡ ಕನಸು ಕಾಣಬೇಕು, ತಮ್ಮ ಸಾಮರ್ಥ್ಯಕ್ಕೆ ಮಿತಿಯನ್ನು ಹಾಕಿಕೊಳ್ಳಬಾರದು ಹಾಗೂ ನಿರಂತರವಾಗಿ ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. "ನೀವೇ ನಮ್ಮ ದೇಶದ ಭವಿಷ್ಯ. ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಿ, ದೇಶಸೇವೆಗೆ ದೊರೆಯುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ನಿಮ್ಮಿಂದ ನಿಮ್ಮ ಕುಟುಂಬಕ್ಕೂ, ದೇಶಕ್ಕೂ ಹೆಮ್ಮೆ ತನ್ನಿ ಎಂದು ಕರೆ ನೀಡಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವೃದ್ಧಿ ವಿಭಾಗದ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ಮಾತನಾಡಿ, ನಾವು ಕೇವಲ ತರಗತಿಯಲ್ಲಿ ಪಾಠ ಮಾಡುವುದಲ್ಲ, ಪ್ರಾಯೋಗಿಕ ತರಬೇತಿ ಮತ್ತು ನೈಜ ಕೈಗಾರಿಕಾ ಅನುಭವದ ಮೂಲಕ ವಿದ್ಯಾರ್ಥಿಗಳನ್ನು ಉದ್ಯಮ ಕ್ಷೇತ್ರಕ್ಕೆ ಸಿದ್ಧಗೊಳಿಸುತ್ತೇವೆ. ಕಲಿಕೆಯ ಪ್ರಕ್ರಿಯೆಯನ್ನು ಆನಂದಿಸಿ, ನಿಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಿ. ಉದ್ಯಮ ಕ್ಷೇತ್ರವು ಕೌಶಲ್ಯಯುತ ವೃತ್ತಿಪರರನ್ನು ಬಯಸುತ್ತದೆ. ಆದ್ದರಿಂದ ಶಿಸ್ತು ಪಾಲಿಸಿ, ಕಲಿಕೆಯ ಪಯಣವನ್ನು ಸಾರ್ಥಕಗೊಳಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ & ಕಾಮರ್ಸ್ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಪೋರ್ಟ್ ಶಿಪ್ಪಿಂಗ್ & ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್‌ನ ಡೀನ್ ಡಾ. ವೆಂಕಟೇಶ್ ಅಮೀನ್ ಸ್ವಾಗತಿಸಿ, ಪ್ರೊ. ಶಿಲ್ಪಾ ವಂದಿಸಿದರು. ಕಾರ್ಯಕ್ರಮವನ್ನು ಪ್ರೊ. ಯಶಸ್ವಿ ಐಲ್ ಹಾಗೂ ಪ್ರೊ. ಅಕ್ಷತಾ ಸ್ಯಾಮ್ಸನ್ ನಿರೂಪಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top