ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಇದರ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ತೃತೀಯ ಬಿ.ಕಾಂ ವಿಭಾಗದ ಪ್ರಣಮ್ ಹಾಗೂ ಕಾರ್ಯದರ್ಶಿಯಾಗಿ ತೃತೀಯ ಬಿಸಿಎ ವಿಭಾಗದ ಶ್ರೇಯಸ್.ಕೆ.ಆರ್ ಮತ್ತು ಜತೆ ಕಾರ್ಯದರ್ಶಿಯಾಗಿ ತೃತೀಯ ಬಿಎಸ್ಸಿ ವಿಭಾಗದ ಎ.ವಿದ್ಯಾಲಕ್ಷ್ಮೀ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಚುನಾವಣೆಯ ಕಾರ್ಯವನ್ನು ಕಾಲೇಜಿನ ಚುನಾವಣಾ ಅಧಿಕಾರಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಮತ್ತು ಕನ್ನಡ ವಿಭಾಗ ಮುಖ್ಯಸ್ಥ ಹಾಗು ವಿಶೇಷ ಅಧಿಕಾರಿ ಡಾ.ಮನಮೋಹನ ಎಂ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಾಗೂ ವಿಶೇಷ ಅಧಿಕಾರಿ (ಶಿಕ್ಷಕರ ಅಭಿವೃದ್ಧಿ) ಡಾ.ವಿದ್ಯಾ ಎಸ್ ಮತ್ತು ಕಾಲೇಜಿನ ಚುನಾವಣಾ ಆಯೋಗದ ಸದಸ್ಯರು ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

