ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಬಿರುವೆರ್ ಕಾಪು ಸೇವಾ ಸಮಿತಿ ಸಹಭಾಗಿತ್ವದಲ್ಲಿ ಭಕ್ತರಿಗೆ ಹಾಳೆ ಮರದ ತೊಗಟೆಯಿಂದ ತಯಾರಿಸಿದ ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣಾ ಕಾರ್ಯಕ್ರಮ ನಡೆಯಿತು.
ಶ್ರೀ ಸಾಯಿ ಈಶ್ವರ್ ಗುರೂಜಿ ಮಾತನಾಡಿ ಪಾಲೆ ಕಷಾಯ ಆರೋಗ್ಯಕ್ಕೆ ಉತ್ತಮವಾಗಿದೆ. ಸೂರ್ಯೋದಯಕ್ಕಿಂತ ಮೊದಲು ಅದನ್ನು ಸೇವಿಸಿದಲ್ಲಿ ಅನೇಕ ರೋಗರುಜಿನಗಳು ಮಾಯವಾಗಲು ಸಾಧ್ಯ ಶ್ರೀ ಕ್ಷೇತ್ರದ ವತಿಯಿಂದ ಭಕ್ತರಿಗೆ ಇದನ್ನು ಉಚಿತವಾಗಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ವಿಘ್ನೇಶ್ ನೀಲಾವರ, ಸತೀಶ್ ದೇವಾಡಿಗ, ರಾಘವೇಂದ್ರ ಪ್ರಭು ಕವಾ೯ಲು ಕ್ಷೇತ್ರದ ಅಭಿಮಾನಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


