ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇವರ ಸಹಯೋಗದಲ್ಲಿ ಆಗಸ್ಟ್ 5 ರಂದು ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪ್ರಧಾನ್ ಪಿ (8ನೇ) ಹಾಗೂ ಮಾನ್ಸಿ ಅಧಿಕ್ ರಾವ್ ಕದಂ (8ನೇ) ಸ್ಪರ್ಧಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
14ರ
ವಯೋಮಾನದ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಶ್ರೀ ಶಾಂತ್ (7ನೇ) ಹಾಗೂ ಮಹಮ್ಮದ್
ರಯಿಫ್ ಸರ್ಫ್ ರಾಜ್ ಖಾನ್ (7ನೇ)
ಚಿನ್ನದ ಪದಕ ಗಳಿಸಿರುತ್ತಾರೆ.
17ರ
ವಯೋಮಾನದ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಆದಿತ್ಯ ಕಟ್ಕರ್ (9ನೇ) ಹಾಗೂ ಬಾಲಕಿಯರ
ವಿಭಾಗದಲ್ಲಿ ಶಿಬಾನಿ ಆರ್ ರೈ (9ನೇ)
ಇವರು ಬೆಳ್ಳಿಯ ಪದಕ ಗಳಿಸಿರುತ್ತಾರೆ.
ಇವರನ್ನು ಶಾಲಾ
ಸಂಚಾಲಕ ರೆ. ವಿಜಯ ಹಾರ್ವಿನ್, ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


