ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಈ ಕುರಿತಾದ ವರದಿಗಳಿಗೆ ಸಂಬಂಧಿಸಿದಂತೆ, ಏರ್ ಇಂಡಿಯಾ ಅಧಿಕೃತ ಹೇಳಿಕೆ ನೀಡಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಮೂಲಕ ತಿರುಚಿಯಿಂದ ಮಂಗಳೂರು ಮಾರ್ಗವಾಗಿ ಮುಂಬೈಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ, ವಿಮಾನದ ವಿಳಂಬದಿಂದಾಗಿ ಮುಂಬೈಗೆ ಹೋಗುವ ಮುಂದಿನ ಸಂಪರ್ಕ ವಿಮಾನವನ್ನು ಅವರು ತಪ್ಪಿಸಿಕೊಳ್ಳಬೇಕಾಗುತ್ತದೆ ಎಂಬ ವಿಷಯವನ್ನು ತಿರುಚಿಯಲ್ಲಿ ವಿಮಾನ ಹತ್ತುವ ಸಂದರ್ಭದಲ್ಲಿ ತಿಳಿಸಲಾಯಿತು. ಪ್ರಯಾಣಿಕರ ಒಪ್ಪಿಗೆಯ ಮೇರೆಗೆ, ಅವರ ಪರಿಷ್ಕೃತ ಪ್ರಯಾಣದ ಯೋಜನೆಗೆ ಅನುಕೂಲವಾಗುವಂತೆ ವಿಮಾನಯಾನ ಸಂಸ್ಥೆಯು ಮಂಗಳೂರಿನಲ್ಲಿ ರಾತ್ರಿಯ ವಾಸ್ತವ್ಯಕ್ಕಾಗಿ ಹೋಟೆಲ್ ವ್ಯವಸ್ಥೆಯನ್ನು ಕಲ್ಪಿಸಿತ್ತು. ದುರದೃಷ್ಟವಶಾತ್, ಹೋಟೆಲ್ನಲ್ಲಿ ತಂಗಿದ್ದಾಗ ಆ ಪ್ರಯಾಣಿಕರು ಮೃತಪಟ್ಟರು.
"ವಿಮಾನ ಸಂಪರ್ಕ ತಪ್ಪಿದ ಕಾರಣದಿಂದಾಗಿ ವಿಮಾನಯಾನ ಸಂಸ್ಥೆಯು ಹೋಟೆಲ್ನಲ್ಲಿ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿದ್ದ ಮಂಗಳೂರಿನ ಹೋಟೆಲ್ ಒಂದರಲ್ಲಿ ನಮ್ಮ ಪ್ರಯಾಣಿಕರೊಬ್ಬರು ಮೃತಪಟ್ಟಿರುವುದು ನಮಗೆ ತೀವ್ರ ದುಃಖವನ್ನುಂಟುಮಾಡಿದೆ. ಮೃತರ ಕುಟುಂಬಕ್ಕೆ ನಾವು ನಮ್ಮ ಸಂತಾಪವನ್ನು ಸೂಚಿಸುತ್ತೇವೆ. ನಾವು ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ರೀತಿಯ ನೆರವನ್ನು ಒದಗಿಸುತ್ತೇವೆ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುವುದನ್ನು ಮುಂದುವರಿಸುತ್ತೇವೆ."
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


