ಡಾ.ಶಿವರಾಮ ಕಾರಂತ ಜನ್ಮದಿನಾಚರಣೆ :ಪ್ರಬಂಧ ಸ್ಪರ್ಧೆ

Upayuktha
0

 


ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತಟ್ರಸ್ಟ್ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನವನ್ನು ಅಕ್ಟೋಬರ್ 10 ರಂದು ವೈಶಿಷ್ಟ ಪೂರ್ಣ ಕಾರ್ಯಕ್ರಮಗಳ ಮೂಲಕ ನಡೆಸಲು ಟ್ರಸ್ಟಿನ ಸರ್ವಸದಸ್ಯರ ಸಭೆಯಲ್ಲಿ ನಿರ್ಧರಿಸಲಾಗಿದೆ.ಅದರ ಅಂಗವಾಗಿ ಕಾರಂತರ ಯಾವುದಾದರೂ ಒಂದು ಕೃತಿಯ ಬಗ್ಗೆ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಾರ್ವಜನಿಕರಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರಬಂಧವು ಫುಲ್ ಸ್ಕೇಪ್ ಹಾಳೆಯಲ್ಲಿ ಹತ್ತು ಪುಟಗಳು ಅಥವಾ ಎರಡು ಸಾವಿರ ಶಬ್ದಗಳನ್ನು ಮೀರಬಾರದು. ಪ್ರಬಂಧಗಳನ್ನು ಸ್ವಂತ ಅಕ್ಷರಗಳಲ್ಲಿ ಅಥವಾಟೈಪ್ ಮಾಡಬಹುದು. ಪ್ರತಿವಿಭಾಗದಲ್ಲೂ ಪ್ರಥಮ ದ್ವೀತಿಯ ಹಾಗೂ ತೃತೀಯ ಬಹುಮಾನಗಳನ್ನು ಪ್ರಶಸ್ತಿ ಪತ್ರದೊಂದಿಗೆ ಪುಸ್ತಕ ರೂಪದಲ್ಲಿ ನೀಡಲಾಗುವುದು.


ಪ್ರಬಂಧಗಳನ್ನು ಸದಸ್ಯ ಕಾರ್ಯದರ್ಶಿ, ಡಾ.ಶಿವರಾಮ ಕಾರಂತಟ್ರಸ್ಟ್, ಸಹಾಯಕ ನಿರ್ದೇಶಕರ ಕಛೇರಿ ಆವರಣ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವರಾಮ ಕಾರಂತ ಕಲಾಗ್ರಾಮ ಪ್ರಗತಿನಗರ, ಅಲೆವೂರು ಉಡುಪಿ- 576104 ಇವರಿಗೆ ಸೆಪ್ಟಂಬರ್ 15 ರೊಳಗೆ ಕಳುಹಿಸಲು ಕೋರಲಾಗಿದೆ.ಉತ್ತಮ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ವಿವರಗಳಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಡುಪಿ ಜಿಲ್ಲೆಅಥವಾ ಮೊಬೈಲ್ ಸಂಖ್ಯೆ :9964583433 ಅಥವಾ 6362517472 ಅನ್ನು ಸಂಪರ್ಕಿಸಬಹುದಾಗಿದೆಎಂದು ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top