ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಸಂಭ್ರಮದ ರಕ್ಷಾಬಂಧನ

Upayuktha
0

ಪ್ರೀತಿ, ವಿಶ್ವಾಸ ಮತ್ತು ಬಾಂಧವ್ಯದ ಹಬ್ಬ – ರಕ್ಷಾಬಂಧನ


ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠ ಮುಜುಂಗಾವಿನಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಶಾಲಾ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀ ಸುಬ್ರಮಣ್ಯ ಭಟ್ ಬೆಜಪ್ಪೆ ರಕ್ಷಾಬಂಧನದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಹಿರಿಯಾಧ್ಯಾಪಕರಾದ ಶ್ರೀ ಬಾಲಕೃಷ್ಣ ಶರ್ಮ ಅನಂತಪುರ ಇವರು ರಕ್ಷಾಬಂಧನದ ಮಹತ್ವವನ್ನು  ವಿದ್ಯಾರ್ಥಿಗಳಿಗೆ ವಿವರಿಸಿದರು.ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿ ರಕ್ಷಾಬಂಧನ ದಿನವನ್ನು ಆಚರಿಸಿದರು.


ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಉದಯಕುಮಾರ್ ಮಾಯಿಪ್ಪಾಡಿ, ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿ ಶ್ರೀ ಬಾಲಕೃಷ್ಣ ಶರ್ಮ ಅನಂತಪುರ , ಆಡಳಿತ ಸಮಿತಿಯ ಸದಸ್ಯರಾದ ಶ್ರೀ ಶ್ಯಾಮರಾಜ ದೊಡ್ಡಮಾಣಿ,ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಶ್ಯಾಮ್ ಭಟ್ ದರ್ಬೆಮಾರ್ಗ ಹಾಗೂ ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾ ಸರಸ್ವತಿ ಮತ್ತು ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಅಧ್ಯಾಪಿಕೆ ಶ್ರೀಮತಿ ಶ್ರೀದೇವಿ ಕಾರ್ಯಕ್ರಮವನ್ನು ನಿರ್ವಹಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top