ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ನಾವು ಈ ವರ್ಷ ಮೂರನೇ ವರ್ಷದ ಆಟಿ ಕೂಟವನ್ನು ಆಚರಿಸುತ್ತಿದ್ದು, ನಮ್ಮ ಆಚರಣೆಗಳು ಮಕ್ಕಳಲ್ಲಿ ಹಾಸುಹೊಕ್ಕಾಗಿರಬೇಕು ಎನ್ನುವ ಕಲ್ಪನೆಯೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಜೊತೆಗೆ, ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾ, ಸರಳ ಜೀವನದೊಂದಿಗೆ ಉನ್ನತ ಮಟ್ಟಕ್ಕೆ ಏರಬೇಕೆಂದು ಹೇಳಿದರು.
ವಿಶೇಷ ಆಕರ್ಷಣೆಯಾಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಕಂಗೀಲು, ಆಟಿಕಳೆಂಜ, ಹುಲಿ ಕುಣಿತ, ತುಳುನಾಡಿನ ವೈಭವವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಆಟಿ ತಿಂಡಿಯ ಪ್ರದರ್ಶನವು ನಡೆಯಿತು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

