ಪುತ್ತೂರು: ದ.ಕ.ಜಿ.ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇಂದ್ರ ಪ್ರಸ್ಥ ವಿದ್ಯಾಲಯ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 28, 2026 ರಂದು ನಡೆದ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ 7ನೇ ತರಗತಿಯ ಕೌಶಿಕ್ ಯಸ್ ಆರ್ ಹಾಗೂ ಅನ್ವೇಷ್ ಪರ್ಪಲ ಇವರು ಸ್ಪರ್ಧಿಸಿ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರನ್ನು ಶಾಲಾ ಸಂಚಾಲಕರಾದ ರೆ.ವಿಜಯ ಹಾರ್ವಿನ್,ಶಾಲಾ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಶುಭ ಹಾರೈಸಿ ಅಭಿನಂದಿಸಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


