ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ಸಂಘ ಹಾಗೂ ಪರ್ಫಾರ್ಮಿಂಗ್ ಅಸೋಸಿಯೇಷನ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ದ್ವಿತೀಯ ವರ್ಷದ ಎಂ.ಎಸ್ಸಿ. ಗಣಿತಶಾಸ್ತ್ರ ವಿದ್ಯಾರ್ಥಿನಿ ಶ್ರೀದೇವಿ ಎನ್. ಶಿಕ್ಷಕರಿಗೆ ಹೃದಯಸ್ಪರ್ಶಿ ಅಭಿನಂದನಾ ಭಾಷಣ ಸಲ್ಲಿಸಿದರು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ದರ್ಬೆ ಶಾಖೆಯ ವ್ಯವಸ್ಥಾಪಕ ಸುರೇಶ್ ಹಾಗೂ ಪುತ್ತೂರು ಮುಖ್ಯಶಾಖೆಯ ವ್ಯವಸ್ಥಾಪಕ ಅನೀಶ್ ಕುಮಾರ್ ಅತಿಥಿಗಳಾಗಿದ್ದರು. ಅನೀಶ್ ಕುಮಾರ್ ಮಾತನಾಡಿ, ಕಾಲೇಜು ಶೈಕ್ಷಣಿಕ ಶ್ರೇಷ್ಠತೆಯೊಂದಿಗೆ ಮೌಲ್ಯಾಧಾರಿತ ಹಾಗೂ ಸಮಗ್ರ ಶಿಕ್ಷಣಕ್ಕೆ ನೀಡುತ್ತಿರುವ ಆದ್ಯತೆಯನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳ ವ್ಯಕ್ತಿತ್ವ, ಆತ್ಮವಿಶ್ವಾಸ ಮತ್ತು ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಶಿಕ್ಷಕರು ನಿರ್ವಹಿಸುವ ರೂಪಣಾತ್ಮಕ ಜವಾಬ್ದಾರಿಯನ್ನು ವಿವರಿಸಿದರು. “ಶಿಕ್ಷಣವೆಂದರೆ ಕೇವಲ ಜ್ಞಾನ ನೀಡುವುದಲ್ಲ; ಯುವ ಮನಸ್ಸುಗಳನ್ನು ರೂಪಿಸುವ ಕಾರ್ಯವೂ ಹೌದು” ಎಂದರು.
ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಮಾಲಿನ್ ಕೆ. ಹಾಗೂ ಪರೀಕ್ಷಾಂಗ ಕುಲಸಚಿವ, ಡಾ. ವಿನಯಚಂದ್ರ ಶಿಕ್ಷಕರ ದಿನಾಚರಣೆ ಸಂದೇಶ ನೀಡಿದರು.
ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಕಾಲೇಜಿನ ವಿದ್ಯಾರ್ಥಿಗಳೆಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿದ್ಯಾರ್ಥಿ ಕಲ್ಯಾಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಗೌಡ, ಸ್ಪಿಯರ್ಲ್ ಫಿಯೋನಾ ಪೆರೇರಾ, ಯಕ್ಷಕಲಾಕೇಂದ್ರದ ಸಂಯೋಜಕ ಪ್ರಶಾಂತ್ ರೈ ಹಾಗೂ ವಿದ್ಯಾರ್ಥಿ ಸಂಘ ಪದಾಧಿಕಾರಿಗಳಾದ ಲಿಖಿತ್, ಜಯಕೃಷ್ಣ ಮತ್ತು ನಿಶ್ಮಿತಾ ರೈ ಕಾರ್ಯಕ್ರಮ ಸಂಯೋಜಿಸಿದರು. ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ಶ್ರೀವಿದ್ಯಾ ಎನ್. ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


